ಬಾಲಕರ ವಿದ್ಯಾರ್ಥಿ ನಿಲಯಕ್ಕೆ ತಹಶೀಲ್ದಾರ್ ಎಂ. ಮಮತಾ ಭೇಟಿ.

0
46

ಹಾಸನ ಸಮಾಚಾರ ವರದಿ, ಬೇಲೂರು. 

ಬೇಲೂರು ತಾಲ್ಲೂಕಿನ ಹಳೇಬೀಡು ಪಟ್ಟಣದಲ್ಲಿರುವ ಬಾಲಕರ ವಿದ್ಯಾರ್ಥಿ
ವಸತಿ ನಿಲಯಕ್ಕೆ ತಹಶೀಲ್ದಾರ್ ಎಂ. ಮಮತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಹಾಸ್ಟೆಲ್​ನಲ್ಲಿನ ಸ್ವಚ್ಛತೆ, ನಿಲಯ ನಿರ್ವಹಣೆ ಮತ್ತು ಮೂಲಭೂತ ಸೌಕರ್ಯಗಳು ಸೇರಿದಂತೆ ಇನ್ನಿತರ ಅವಶ್ಯಕತೆಗಳ ಬಗ್ಗೆ ಪರಿಶೀಲನೆ ಮಾಡಿದ್ದು, ನಿರ್ವಹಣೆಯನ್ನು ಕಂಡು ಬೆರಗಾಗಿದ್ದಾರೆ. ಬಡ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡುವ ಉದ್ದೇಶದಿಂದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗ್ರಾಮೀಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ಹತ್ತು ಹಲವು ಸೌಲಭ್ಯಗಳನ್ನು ನೀಡುತ್ತಿದೆ. ನಿಲಯದಲ್ಲಿ ನಿಲಯ ಪಾಲಕರ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳು ಇಲ್ಲದರಿರುವುದರಿಂದ ಈ ರೀತಿಯ ಸಮಸ್ಯೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ವಿದ್ಯಾರ್ಥಿ ನಿಲಯದಲ್ಲಿ ಎಷ್ಟು ಮಕ್ಕಳಿದ್ದಾರೆ, ನಿಲಯಕ್ಕೆ ನೀಡಿರುವ ಸೌಲಭ್ಯಗಳ ಬಗ್ಗೆ ಸಕ್ರಿಯವಾದ ದಾಖಲೆಗಳ ಪರಿಶೀಲನೆ ಮಾಡಿದರು.

ವಿದ್ಯಾರ್ಥಿಗಳ ದೂರು : ನಿಲಯ ಪಾಲಕರು ಇಲ್ಲಿಗೆ ಬಂದು ನಮ್ಮ ಸಮಸ್ಯೆಗಳನ್ನು ಕೇಳುವುದಿಲ್ಲ. ಯಾವ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಬಯೋಮೆಟ್ರಿಕ್ ವ್ಯವಸ್ಥೆ ಕೆಟ್ಟು ಎರಡು ತಿಂಗಳಿಂದ ಹಾಜರಾತಿ ಹಾಕಿಲ್ಲ, ಪ್ರತಿ ತಿಂಗಳು ನೀಡುವ ಸೌಲಭ್ಯಗಳನ್ನು ಕೇಳಿದರೆ ಅರ್ಜಿ ಬರೆದು ಕೊಡಿ ಎಂದು ಉಡಾಫೆ ಉತ್ತರಗಳನ್ನು ನೀಡುತ್ತಾರೆ. ಅನೇಕ ಸಮಸ್ಯಗಳ ಸುಳಿಯಲ್ಲಿ ನಾವು ವಿಧಾಭ್ಯಾಸ ನಡೆಸುತ್ತಿದ್ದೇವೆ, ಈ ಹಿಂದೆ ಅದೆಷ್ಟೋ ವಿದ್ಯಾರ್ಥಿಗಳು ಇಲ್ಲಿಯ ಸಮಸ್ಯೆಗಳನ್ನು ಕಂಡು ಹಾಸ್ಟೆಲ್ ತೊರೆದು ಕಷ್ಟವಾದರೂ ತಮ್ಮ ಊರಿನಿಂದ ತರಗತಿಗಳಿಗೆ ಬಂದೂಗುತ್ತಿದ್ದಾರೆ ಎಂದು ತಹಶೀಲ್ದಾರ್ ಎಂ ಮಮತಾ ಅವರ ಎದುರು ತಮ್ಮ ಅಳಲು ತೋಡಿಕೊಂಡರು.